Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬಿಜೆಪಿ ಮುಖಂಡ ಸತೀಶ್ ಪ್ರಭು ಅವರ ಅಕಾಲಿಕ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ
    ಕರಾವಳಿ

    ಬಿಜೆಪಿ ಮುಖಂಡ ಸತೀಶ್ ಪ್ರಭು ಅವರ ಅಕಾಲಿಕ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ

    March 4, 2026Updated:March 4, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರು, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ, ಬಿಜೆಪಿಯ ಮುಖಂಡರಾದ ಸತೀಶ್ ಪ್ರಭು ಅವರ ಅಕಾಲಿಕ ನಿಧನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

    ಸತೀಶ್ ಪ್ರಭು ಅವರು ಆರೆಸ್ಸೆಸ್ಸ್ ಸ್ವಯಂಸೇವಕರಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದರು. ಸಂಘನಿಕೇತನದ ಕೇಶವ ಸಂವರ್ಧನ ಸಮಿತಿಯ ಉಪಾಧ್ಯಕ್ಷರಾಗಿ ಹಾಗೂ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಅವರು ನೀಡಿದ ಸೇವೆ ಅವಿಸ್ಮರಣೀಯ. ಕಾರ್ ಸ್ಟ್ರೀಟ್‌ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿಯೂ ಅವರು ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದರು. ಹೀಗಾಗಿ, ಅವರ ಅಗಲಿಕೆಯು ಅತೀವ ದುಃಖವುಂಟು ಮಾಡಿದೆ ಎಂದು ಕ್ಯಾ. ಚೌಟ ಅವರು ಕಂಬನಿ ಮಿಡಿದಿದ್ದಾರೆ.

    “ಬಿಜೆಪಿ ಜಿಲ್ಲಾ ವಕ್ತಾರರಾಗಿ ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ಸತೀಶ್‌ ಪ್ರಭು ಅವರು ಪ್ರಮುಖ ಪಾತ್ರ ವಹಿಸಿರುವುದು ಮಾತ್ರವಲ್ಲದೇ ಕಿರಿಯ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿದ್ದರು. ಅವರ ಅಗಲಿಕೆಯಿಂದ ಹಿರಿಯ ಸಂಘಟಕ ಮತ್ತು ಸಜ್ಜನ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬ ವರ್ಗದವರಿಗೆ ಹಾಗೂ ಸ್ನೇಹಿತ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕ್ಯಾ.ಚೌಟ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    ಹಿರಿಯ ಆರ್‌ಎಸ್‌ಎಸ್ ಕಾರ್ಯಕರ್ತ, ಬಿಜೆಪಿಯ ಹಿರಿಯ ನಾಯಕ ಸತೀಶ್ ಪ್ರಭು ವಿಧಿವಶ

    __Sathish Kapikad

    Share. Facebook Twitter Pinterest LinkedIn Email WhatsApp
    Previous Articleಮುಲ್ಕಿಯಲ್ಲಿ ಮಹಾದಾನಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭೆಯಲ್ಲಿ ಐಕಳ ಹರೀಶ್ ಶೆಟ್ಟಿ ಘೋಷಣೆ
    Next Article ಶಕ್ತಿಶಾಲಿ ಶೈಕ್ಷಣಿಕ ಸಾಧನೆ ರುಜುವಾತು : 2023 -24 ಮತ್ತು 2024- 25ನೇ ಶೈಕ್ಷಣಿಕ ವರ್ಷದಲ್ಲಿ12 ರ್‍ಯಾಂಕ್‌ ಪಡೆದ ಕೆನರಾ ಕಾಲೇಜು

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.