
ಮಂಗಳೂರು: ಪ್ರಾರ್ಥನಾ ಕ್ರಿಯೇಷನ್ಸ್ ಮಂಗಳೂರು ಲಾಂಛನದಲ್ಲಿ ಬಹುಭಾಷೆಯಲ್ಲಿ ಡಾ| ಆರ್. ಧನರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ “ಕೊರಗ್ಲಾ ತನಿಯಾ” (ಕೊರಗಜ್ಜ) ಮತ್ತು “ಕನ” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಎಪ್ರಿಲ್ 23 ಗುರುವಾರ ಬೆಳಿಗ್ಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಡಾ| ಆರ್. ಧನರಾಜ್ ಅವರ ಮಾತೃ ಶ್ರೀಯವರು ದೀಪ ಪ್ರಜ್ವಲನೆ ಮಾಡುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು. “ಕೊರಗ್ಲಾ ತನಿಯಾ” ಸಿನಿಮಾಕ್ಕೆ ಶಾಸಕ ಸಿ.ಬಿ. ಸುರೇಶ್ ಬಾಬು ಅವರು ಆರಂಭ ಫಲಕ ತೋರಿಸಿದರು. ಕನ” ತುಳು ಸಿನಿಮಾಕ್ಕೆ ಉದ್ಯಮಿ ಹಾಗೂ ಸಮಾಜ ಸೇವಕ ಎ .ಜಿ ಶೆಟ್ಟಿ ಆರಂಭ ಫಲಕ ತೋರಿಸಿದರು.


ಶಾಸಕ ಸಿ.ಬಿ. ಸುರೇಶ್ ಬಾಬು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬಹುಭಾಷಾ ನಟ ಸುಮನ್ ತಲ್ವಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಡಾ| ಆರ್ ಧನರಾಜ್ ಸ್ವಾಗತಿಸಿದರು.



“ಕೊರಗ್ಲಾ ತನಿಯಾ” (ಕೊರಗಜ್ಜ) ಮತ್ತು “ಕನ” ತುಳು ಚಲನ ಚಿತ್ರದ ಸಹ ನಿರ್ಮಾಪಕಿ ಅರ್ಚನಾ ಶೆಟ್ಟಿ ವಂದನಾರ್ಪಣೆಗೈದರು. ಚೇತನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಚಿತ್ರ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್, ಪಮ್ಮಿ ಕೊಡಿಯಾಲ್ ಬೈಲ್, ಚಿತ್ರದ ನಾಯಕಿ ನಟಿ ಸೇರಿದಂತೆ ಅನೇಕ ಮಂದಿ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಬಹುಭಾಷಾ “ಕೊರಗ್ಲಾ ತನಿಯಾ” ಸಿನಿಮಾಕ್ಕೆ ಡಾ ಆರ್ ಧನರಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣದೊಂದಿಗೆ ನಿರ್ದೇಶನ ಮಾಡಲಿದ್ದಾರೆ.

“ಕನ” ತುಳು ಸಿನಿಮಾಕ್ಕೆ ವಿಶ್ವನಾಥ್ ಕೋಡಿಕಲ್ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸಲಿದ್ದಾರೆ. ಅರ್ಚನ ಶೆಟ್ಟಿ ಎರಡೂ ಸಿನಿಮಾಗಳ ಸಹ ನಿರ್ಮಾಪಕಿಯಾಗಿದ್ದಾರೆ.
_Sathish Kapikad

