Close Menu
SK Media NewsSK Media News
    What's Hot

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್
    ಕರಾವಳಿ

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಮೇ.06: ಮಂಗಳೂರಿನ ಮಾತಾ ಅಮೃತಾನಂದಮಯಿ ಮಠಕ್ಕೆ ಮೇ 28 ರಂದು ಆಗಮಿಸುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಕಾರ್ಯಕ್ರಮ” ಬ್ರಹ್ಮಸ್ಥಾನಂ ಮಹೋತ್ಸವ ಮತ್ತು ಅಮೃತಸಂಗಮ 2026″ದ ಪ್ರಯುಕ್ತ ಚಪ್ಪರ ಮುಹೂರ್ತ ಜರುಗಿತು.

    ಸ್ವಾಮಿನಿ ಮಂಗಳಾಮೃತ ಪ್ರಾಣ ರವರ ಉಪಸ್ಥಿತಿಯಲ್ಲಿ ನಡೆದ ಈ‌ ಕಾರ್ಯಕ್ರಮದಲ್ಲಿ ನಿಕಟಪೂರ್ವ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡುತ್ತಾ ” ಮಾನವ ಮಹಾದೇವತ್ವಕ್ಕೆ ಏರುವ ಪುಣ್ಯಭೂಮಿ ಭಾರತ.ನಡೆದಾಡುವ , ಮಾತನಾಡುವ ದೇವರಾದ ಮಾತಾ ಅಮೃತಾನಂದಮಯಿ ದೇವಿಯವರು ಜಗತ್ತಿಗೆ ಪ್ರೇಮದ ಸಂದೇಶಗಳನ್ನು ಸಾರುತ್ತಿದ್ದಾರೆ.ಪ್ರೀತಿ ಮತ್ತು ವಾತ್ಸಲ್ಯ ತಾಯಿಯ ಸಹಜ ಗುಣ .ಅಮ್ಮನವರು ಶ್ರೇಷ್ಠವಾದ ಶಿಕ್ಷಣ ಯಜ್ಞ , ಆರೋಗ್ಯ ಯಜ್ಞ ಮೊದಲಾದ ಹತ್ತಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ.ಇಲ್ಲಿನ ಸೇವಾ ಸಮಿತಿಯು ಅತ್ಯುತ್ತಮ ಕಾರ್ಯಕ್ರಮಗಳನ್ನು ಕಳೆದ ಹಲವು ವರ್ಷಗಳಿಂದ ಮಾಡುತ್ತಾ ಬಂದಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

    ಗೌರವಾಧ್ಯಕ್ಷ ಡಾ.ಜೀವರಾಜ್ ಸೊರಕೆ ಮಾತನಾಡಿ ಅಮ್ಮನವರು ಈ ಬಾರಿ ರಾಜ್ಯದಲ್ಲಿ ಏಕೈಕ ಸ್ಥಳಕ್ಕೆ ಭೇಟಿ ನೀಡುತ್ತಿರುವುದು ಅದರಲ್ಲಿ ಮಂಗಳೂರಿನಲ್ಲಿ ಈ ಕಾರ್ಯಕ್ರಮ ನಡೆಸುವ ಸೌಭಾಗ್ಯ ಇಲ್ಲಿನ ಭಕ್ತರ ಪಾಲಿಗೆ ಲಭಿಸಿದೆ. ಮಂಗಳೂರಿನ ಕಾರ್ಯಕ್ರಮ ಎಂದರೆ ಅದು ಶ್ರೇಷ್ಠ ಮಟ್ಟದ ಕಾರ್ಯಕ್ರಮವಾಗಿರುತ್ತದೆ ಎಂಬ ಅನುಭವ ಅಸಂಖ್ಯಾತ ಭಕ್ತರದ್ದಾಗಿದೆ. ಅವರೆಲ್ಲರೂ ಅಮ್ಮನವರ ದರ್ಶನಕ್ಕೆ ಮಂಗಳೂರನ್ನು ಆಯ್ಕೆ ಮಾಡುತ್ತಿರುವ ಕಾರಣ ನಮ್ಮ ಜವಾಬ್ದಾರಿ ಬಹಳ ಮಹತ್ವದ್ದಾಗಿದೆ.

    ಆದಷ್ಟು ಹೆಚ್ಚಿನ ಭಕ್ತರು ಪೂಜೆ ಸಲ್ಲಿಸುವ ಮೂಲಕ ಅಮ್ಮನ ಕಾರ್ಯಕ್ರಮದ ಯಶಸ್ವಿಯಾಗಿ ನೆರವೇರಲು ಸರ್ವರ ಸಹಕಾರ ಕೋರಿದರು.

    ಸ್ವಾಮಿನಿ ಮಂಗಳಾಮೃತ ಪ್ರಾಣರವರು ಆಶೀರ್ವಚನವಿತ್ತು”ಅಮ್ಮನವರ ಭೇಟಿಯ ಬಗ್ಗೆ ಕಳೆದ ಏಳು ವರ್ಷಗಳಿಂದ ಕಾತರದಿಂದ ಕಾದು ಕುಳಿತ ಭಕ್ತರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಹೆಚ್ಚಿನ ಜನರು ಇದರ ಪ್ರಯೋಜನ ಪಡೆಯುವಂತೆ ಕರೆಯಿತ್ತರು.

    ಗೌರವಾಧ್ಯಕ್ಷರಾದ ಡಾ. ವಸಂತ ಕುಮಾರ್ ಪೆರ್ಲ ಕಾರ್ಯಕ್ರಮ ನಿರೂಪಣೆ ಮಾಡಿ ಅಮ್ಮನ ಕಾರ್ಯಕ್ರಮದ ಸ್ವರೂಪವನ್ನು ತಿಳಿಸಿದರು. ಗುತ್ತಿಗೆದಾರ ಶ್ರೀ ಭಾಸ್ಕರ್ ಭಟ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಮಾಜಿ‌ಮೇಯರ್ ಗಣೇಶ್ ಹೊಸಬೆಟ್ಟು, ಗೌರವ ಅಧ್ಯಕ್ಷ ಸಿ ಎ. ವಾಮನ್ ಕಾಮತ್, ಮುರಳೀಧರ್ ಶೆಟ್ಟಿ, ವಾಮನ್ ಮೈಂದನ್, ಚಂದ್ರಹಾಸ್ ಸುವರ್ಣ,ಗಣೇಶ್ ಕೆ,ಕೃಷ್ಣಶೆಟ್ಟಿ,ಅಡ್ವೊಕೇಟ್ ಪುಷ್ಪಲತಾ, ಅಮೃತ ವಿದ್ಯಾಲಯಂ ಪ್ರಾಂಶುಪಾಲೆ ಮಧುಲಿಖಾ ರಾವ್ ಸೇವಾ ಸಮಿತಿಯ ಪದಾಧಿಕಾರಿಗಳು, ಅಯುಧ್ ಮಂಗಳೂರು ಮತ್ತು ಅಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ
    Next Article ಮೇ 28ರಂದು ಅಮ್ಮ ಮಂಗಳೂರಿಗೆ : ಅಮೃತಸಂಗಮ ಪ್ರಚಾರ ಪೋಸ್ಟರ್ ಬಿಡುಗಡೆ

    Related Posts

    ಕರಾವಳಿ

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026
    ಕರಾವಳಿ

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026
    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.