Close Menu
SK Media NewsSK Media News
    What's Hot

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮೇ 28ರಂದು ಅಮ್ಮ ಮಂಗಳೂರಿಗೆ : ಅಮೃತಸಂಗಮ ಪ್ರಚಾರ ಪೋಸ್ಟರ್ ಬಿಡುಗಡೆ
    ಕರಾವಳಿ

    ಮೇ 28ರಂದು ಅಮ್ಮ ಮಂಗಳೂರಿಗೆ : ಅಮೃತಸಂಗಮ ಪ್ರಚಾರ ಪೋಸ್ಟರ್ ಬಿಡುಗಡೆ

    May 11, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರೂ ಕೋಟ್ಯಾಂತರ ಭಕ್ತರ ಆರಾಧ್ಯಮಾತೆಯೂ ಆಗಿರುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಮಂಗಳೂರಿಗೆ ಆಗಮಿಸುವ ಪ್ರಯುಕ್ತ ನಡೆಯಲಿರುವ ಬ್ರಹ್ಮಸ್ಥಾನಂ ಮಹೋತ್ಸವ- ಅಮೃತಸಂಗಮ 2026 ಕಾರ್ಯಕ್ರಮದ ಪ್ರಚಾರಾರ್ಥ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜರುಗಿತು.

    ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

    ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್ ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿ ಮಾತಾ ಅಮೃತಾನಂದಮಯಿ ದೇವಿಯವರು ಮಂಗಳೂರಿನ ಈ ಹಿಂದಿನ ಕಾರ್ಯಕ್ರಮದಲ್ಲಿ ದಾಖಲೆಯ ಸಂಖ್ಯೆಯಲ್ಲಿ , ಅತ್ಯಧಿಕ ಗಂಟೆಗಳ ಕಾಲ ಬಳಿಬಂದ ಪ್ರತಿಯೊಬ್ಬರನ್ನು ಅಪ್ಪಿ ಆಲಂಗಿಸಿ ಅನುಗ್ರಹಿಸಿರುತ್ತಾರೆ. ಈ ಬಾರಿಯ ಕಾರ್ಯಕ್ರಮವು ಏಳು ವರ್ಷಗಳ ಬಳಿಕ ನಡೆಯುತ್ತಿರುವುದಲ್ಲದೆ ಕರ್ನಾಟಕದಲ್ಲಿ ಏಕೈಕ ಕಾರ್ಯಕ್ರಮ ಇದಾಗಿರುವುದರಿಂದ ಬಹಳ ಮಹತ್ವ ಪಡೆದಿದ್ದು ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆಗಳಿವೆ. ನನ್ನ ಕ್ಷೇತ್ರದಲ್ಲಿರುವ ಈ ಪವಿತ್ರ ಸನ್ನಿಧಿಗೆ ಬರುವ ಜನರಿಗೆ, ಸೇವಾರ್ಥಿಗಳಿಗೆ ಅಗತ್ಯವಾಗಿ ಬೇಕಾಗಿರುವ 10 ಶೌಚಾಲಯಗಳನ್ನು ನಿರ್ಮಿಸಲಾಗಿದೆ.ಈ ಪವಿತ್ರ ಸೇವೆಯಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ. ಅಮ್ಮನವರ ಕಾರ್ಯಕ್ರಮಕ್ಕೆ ಸಾರ್ವಜನಿಕರು ಬಂದು ಭಾಗವಹಿಸಿ ಅಮ್ಮನವರ ಅನುಗ್ರಹಕ್ಕೆ ಪಾತ್ರರಾಗುವಂತೆ ಕರೆಯಿತ್ತರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಶ್ರೀ ಐವನ್ ಡಿ’ಸೋಜ ಮಾತನಾಡಿ ಅಮ್ಮನವರ ಪಾದಸ್ಪರ್ಶದಿಂದ ಈ ಭಾಗದಲ್ಲಿ ಸಕಾರಾತ್ಮಕ ಪರಿವರ್ತನೆಯಾಗಿದ್ದು, ಅಮ್ಮನವರ ಮಾನವೀಯ ಸೇವಾಯೋಜನೆಗಳು ಜನತೆಗೆ ಪ್ರಯೋಜನಕಾರಿಯಾಗಿದೆ.ಇಲ್ಲಿ ನಡೆದ ಉಚಿತ ಹೃದಯ ಶಸ್ತ್ರ ಚಿಕಿತ್ಸಾ ಶಿಬಿರವು ಅಸಹಾಯಕ ಪೋಷಕರಿಗೆ ವರದಾನವೆನಿಸಿದೆ .ಆರೋಗ್ಯ ಸೇವೆಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಂತೃಪ್ತಿ ತಂದಿದೆ. ಮೇ 28 ಮತ್ತು 29 ರಂದು ಅಮೃತ ವಿದ್ಯಾಲಯಂ ಮೈದಾನದಲ್ಲಿ ನಡೆಯುವ ಅಮ್ಮನವರ ಕಾರ್ಯಕ್ರಮಕ್ಕೆ ನಾನು ಮತ್ತು ವಿಧಾನಸಭಾ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್ ನಮ್ಮ ರಾಜಕೀಯ ಮರೆತು ಜೊತೆಯಾಗಿ ಸರ್ವರೀತಿಯ ಸಹಕಾರ ನೀಡುತ್ತೇವೆ ಎಂದು ಭರವಸೆಯಿತ್ತರು.

    ವೇದಿಕೆಯಲ್ಲಿ ಗೌರವಾಧ್ಯಕ್ಷರುಗಳಾದ ಡಾ.ಜೀವರಾಜ್ ಸೊರಕೆ,ಡಾ. ವೈ. ಸನತ್ ಹೆಗ್ಡೆ, ಡಾ.ವಸಂತ ಕುಮಾರ್ ಪೆರ್ಲ,ಅಧ್ಯಕ್ಷರಾದ ಸುರೇಶ್ ಅಮೀನ್, ಚೇತನ್ ಬೆಂಗ್ರೆ,ಮುರಳೀಧರ ಶೆಟ್ಟಿ,ಗಣೇಶ್ ಹೊಸಬೆಟ್ಟು ವಿ. ಎಲ್.ರೇಗೋ ಉಪಸ್ಥಿತರಿದ್ದರು. ಡಾ. ದೇವದಾಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಜಿಲ್ಲೆಯ ವಿವಿಧ ಸಮಿತಿಗಳ ಪದಾಧಿಕಾರಿಗಳು, ಅಮ್ಮನ ಭಕ್ತರು ಭಾಗವಹಿಸಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್
    Next Article ಕುಮಾರಿ ನಿಮಿಷ ಶೆಣೈ ಇವರ ಭರತನಾಟ್ಯ ರಂಗಪ್ರವೇಶ : ವಿಶೇಷ ಚಿತ್ರಗಳು ( Photo Album)

    Related Posts

    ಕರಾವಳಿ

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026
    ಕರಾವಳಿ

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026
    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.