Close Menu
SK Media NewsSK Media News
    What's Hot

    ಗಣೇಶೋತ್ಸವ ಉದ್ಘಾಟನೆ ಮಾಡುವ ಯೋಗ ಸತತ 2ನೇ ಬಾರಿ ತನಗೆ ಒದಗಿ ಬಂದಿರುವುದು ತನ್ನ ಸುದೈವ :ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಉದ್ಘಾಟಿಸಿ ದ. ಕ. ಜಿಲ್ಲಾಧಿಕಾರಿ ದರ್ಶನ್ ಎಚ್. ವಿ 

    September 14, 2026

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಆಯುರ್ವೇದ ಗುರುಕುಲ ಪರಂಪರೆ ಪುನರುಜ್ಜೀವನಗೊಳಿಸುವ ಹಿನ್ನೆಲೆಯಲ್ಲಿ ದ. ಕ. ಜಿಲ್ಲೆಯ ವಿಟ್ಲದ ಮುರುಕಜೆಯಲ್ಲಿ ಮಹಿಳೆಯರಿಗಾಗಿ ಮೈತ್ರೇಯೀ ಆಯುರ್ವೇದ ಗುರುಕುಲ ಆರಂಭ
    ಕರಾವಳಿ

    ಆಯುರ್ವೇದ ಗುರುಕುಲ ಪರಂಪರೆ ಪುನರುಜ್ಜೀವನಗೊಳಿಸುವ ಹಿನ್ನೆಲೆಯಲ್ಲಿ ದ. ಕ. ಜಿಲ್ಲೆಯ ವಿಟ್ಲದ ಮುರುಕಜೆಯಲ್ಲಿ ಮಹಿಳೆಯರಿಗಾಗಿ ಮೈತ್ರೇಯೀ ಆಯುರ್ವೇದ ಗುರುಕುಲ ಆರಂಭ

    August 12, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಅಗಸ್ಟ್. 12: ಪ್ರಾಚೀನ ಆಯುರ್ವೇದ ಗುರುಕುಲ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಮೂರುಕಜೆಯಲ್ಲಿ ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯೀ ಆಯುರ್ವೇದ ಗುರುಕುಲ ಆರಂಭಿಸಲಾಗುತ್ತಿದೆ ಎಂದು ಮೈತ್ರೇಯೀ ಆಯುರ್ವೇದ ಗುರುಕುಲದ ಪ್ರಾಂಶುಪಾಲ ಡಾ.ರವಿಗಣೇಶ್ ಮೊಗ್ರ ತಿಳಿಸಿದರು.

    ನಗರದ ಓಷನ್ ಪರ್ಲ್ ಹೋಟೆಲ್‌ನಲ್ಲಿ ಇಂದು
    ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಅಜೇಯ ಟ್ರಸ್ಟ್ ವತಿಯಿಂದ ಕಳೆದ 32 ವರ್ಷಗಳಿಂದ ವಿಟ್ಲದ ಮೂರುಕಜೆಯಲ್ಲಿ ಮೈತ್ರೇಯೀ ಗುರುಕುಲವನ್ನು ನಡೆಸಲಾಗುತ್ತಿದೆ. ಇಲ್ಲಿ ಬಾಲಕಿಯರಿಗೆ ಸಂಸ್ಕೃತ ಆಧಾರಿತ ಪಂಚಮುಖೀ ಶಿಕ್ಷಣದೊಂದಿಗೆ ಉಚಿತ ವಸತಿ ಮತ್ತು ಶಿಕ್ಷಣ ನೀಡಲಾಗುತ್ತಿದೆ. ವೇದ, ಯೋಗ, ವಿಜ್ಞಾನ, ಕೃಷಿ ಹಾಗೂ ಕಲಾಕೌಶಲಗಳ ಜೊತೆಗೆ ಆಯುರ್ವೇದಕ್ಕೂ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದರು.

    ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆಯಡಿ ಪ್ರತಿ ಐದು ಕೋಟಿ ಜನಸಂಖ್ಯೆಗೆ ಒಂದು ಆಯುರ್ವೇದ ಗುರುಕುಲ ಸ್ಥಾಪನೆಗೆ ಅವಕಾಶವಿದ್ದು, ಕರ್ನಾಟಕದಲ್ಲಿ ಈ ಯೋಜನೆಯಡಿ ಮೊದಲ ಅವಕಾಶ ಮೈತ್ರೇಯೀ ಗುರುಕುಲಕ್ಕೆ ದೊರೆತಿದೆ. ಮಹಿಳೆಯರಿಗೆ ಮಾತ್ರ ಶಿಕ್ಷಣ ನೀಡುವ ಈ ಯೋಜನೆ ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ಅವಕಾಶ ಕಲ್ಪಿಸಲಿದೆ ಎಂದು ಅವರು ಹೇಳಿದರು.

    ಏಳೂವರೆ ವರ್ಷಗಳ ಶಿಕ್ಷಣ: ಆಯುರ್ವೇದ ಗುರುಕುಲದಲ್ಲಿ 7.5 ವರ್ಷಗಳ ವಸತಿ ಶಿಕ್ಷಣ ವ್ಯವಸ್ಥೆ ಇರಲಿದೆ.10ನೇ ತರಗತಿ ಉತ್ತೀರ್ಣ ಬಾಲಕಿಯರು ಪ್ರಿ-ಆಯುರ್ವೇದ ಕಾರ್ಯಕ್ರಮದ ಮೂಲಕ ಪ್ರವೇಶ ಪಡೆದು ಮುಂದಿನ ಹಂತದಲ್ಲಿ BAMS ಶಿಕ್ಷಣವನ್ನು ಮುಂದುವರಿಸಬಹುದಾಗಿದೆ. ಶಿಕ್ಷಣದ ಹೆಚ್ಚಿನ ಭಾಗವನ್ನು ಸಂಸ್ಕೃತ ಆಧಾರಿತವಾಗಿ ನೀಡಲಾಗುತ್ತಿದ್ದು, ಗುರುಕುಲದ ಸಾಂಪ್ರದಾಯಿಕ ವಾತಾವರಣದಲ್ಲೇ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಾಗುತ್ತದೆ.

    ಟ್ರಸ್ಟಿ ಡಾ.ಸುಧಾ ರಾವ್ ಮಾತನಾಡಿ, ಮಹಿಳೆಯರಿಗೆ ಮಾತ್ರ ಆಯುರ್ವೇದ ಶಿಕ್ಷಣ ನೀಡುವುದು ಈ ಯೋಜನೆಯ ವಿಶೇಷತೆಯಾಗಿದೆ. ವಿಟ್ಲದ ಗ್ರಾಮೀಣ ಪ್ರದೇಶದಲ್ಲಿರುವ ಗುರುಕುಲದ ಆವರಣದಲ್ಲೇ ಆಯುರ್ವೇದ ಕಾಲೇಜು ಸ್ಥಾಪಿಸಲಾಗುವುದು. ಇದರಿಂದ ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅವಕಾಶ ದೊರೆಯಲಿದೆ ಎಂದರು.

    ಗುರುಕುಲದ ಭಾಗವಾಗಿ 60 ಹಾಸಿಗೆಗಳ ಆಯುರ್ವೇದ ಆಸ್ಪತ್ರೆ ಸ್ಥಾಪಿಸುವ ಯೋಜನೆಯೂ ಇದೆ. ಆಸ್ಪತ್ರೆಯ ಮೂಲಕ ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆಯುರ್ವೇದ ಚಿಕಿತ್ಸೆ ಒದಗಿಸುವುದರ ಜೊತೆಗೆ BAMS ವಿದ್ಯಾರ್ಥಿನಿಯರಿಗೆ ಪ್ರಾಯೋಗಿಕ ಹಾಗೂ ಕ್ಲಿನಿಕಲ್ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

    ಗುರುಕುಲದಲ್ಲಿ ಈಗಾಗಲೇ ಸಂಸ್ಕೃತದಲ್ಲಿ ಶಿಕ್ಷಣ, ವೇದ, ವಿಜ್ಞಾನ, ಗೋಶಾಲೆ ಹಾಗೂ ಕೃಷಿಯಂತಹ ಚಟುವಟಿಕೆಗಳು ನಡೆಯುತ್ತಿದ್ದು, ಇದೇ ವಾತಾವರಣದಲ್ಲಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪಿಸುವ ಮೂಲಕ ಭಾರತೀಯ ಜ್ಞಾನ ಪರಂಪರೆಯನ್ನು ಮುಂದುವರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಡಾ.ಸುಧಾ ರಾವ್ ಹೇಳಿದರು.

    ಆಯುರ್ವೇದದ ಮೂಲಗ್ರಂಥಗಳು ಹಾಗೂ ಭಾರತೀಯ ವೈದ್ಯಕೀಯ ಪರಂಪರೆಯ ಬಗ್ಗೆ ವಿದ್ಯಾರ್ಥಿನಿಯರಿಗೆ ಆಳವಾದ ಜ್ಞಾನ ನೀಡುವ ಮೂಲಕ ಸಮಾಜಕ್ಕೆ ಉತ್ತಮ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದರು.

    2026ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದ್ದು, ಅರ್ಹ ವಿದ್ಯಾರ್ಥಿನಿಯರಿಗೆ ಯೋಜನೆಯ ಮಾಹಿತಿ ತಲುಪಿಸಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಟ್ರಸ್ಟ್ ಮನವಿ ಮಾಡಿದೆ.

    ಪತ್ರಿಕಾಗೋಷ್ಠಿಯಲ್ಲಿ ಅಜೇಯ ಟ್ರಸ್ಟ್ ಅಧ್ಯಕ್ಷ ಸುಬ್ರಾಯ ಪೈ, ಕಾರ್ಯದರ್ಶಿ ರೂಪಲೇಖಾ ಉಪಸ್ಥಿತರಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಆಟಿ ಅಮಾವಾಸ್ಯೆ: ಅಳಕೆ ಸುವರ್ಣ ಕ್ಲಿನಿಕ್‌ನಲ್ಲಿ ಉಚಿತ ಆಟಿ ಕಷಾಯ ವಿತರಣೆ
    Next Article ಆಟಿ ಅಮಾವಾಸ್ಯೆ : ವೇದಂ ವತಿಯಿಂದ ಕದ್ರಿ ಹಾಗೂ ವೆಲೆನ್ಸಿಯಾ ಶಾಖೆಗಳಲ್ಲಿ ಹಾಲೆಮರದ ಕಷಾಯ ವಿತರಣೆ

    Related Posts

    ಕರಾವಳಿ

    ಗಣೇಶೋತ್ಸವ ಉದ್ಘಾಟನೆ ಮಾಡುವ ಯೋಗ ಸತತ 2ನೇ ಬಾರಿ ತನಗೆ ಒದಗಿ ಬಂದಿರುವುದು ತನ್ನ ಸುದೈವ :ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಉದ್ಘಾಟಿಸಿ ದ. ಕ. ಜಿಲ್ಲಾಧಿಕಾರಿ ದರ್ಶನ್ ಎಚ್. ವಿ 

    September 14, 2026
    ಕರಾವಳಿ

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026
    ಕರಾವಳಿ

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.