ಮುಂಬೈ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿಯವರು ಮನ ನೊಂದು ಇನ್ನು ಮುಂದೆ ಸಮಾಜ ಸೇವೆಗೆ ತನ್ನ ಯಾವುದೇ ಕೊಡುಗೆ ಇಲ್ಲವೆಂದು ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕವಾಗಿ ಪರ ವಿರೋಧ ಚರ್ಚೆಗೆ ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ಮಾಜಿ ಸಂಸದರಾದ ಗೋಪಾಲ್ ಶೆಟ್ಟಿ, ಬರೋಡ ಶಶಿಧರ ಶೆಟ್ಟಿ, ಮಹೇಶ್ ಶೆಟ್ಟಿ ತೆಳ್ಳಾರ್, ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್ , ಪಟ್ಲ ಸತೀಶ್ ಶೆಟ್ಟಿ, ಕೆ. ಕೆ. ಶೆಟ್ಟಿ ಅಹ್ಮದ್ ನಗರ, ಅಶೋಕ್ ಶೆಟ್ಟಿ ಬೆಳ್ಳಾಡಿ, ಅರವಿಂದ್ ಆನಂದ್ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಶಶಿಧರ ಶೆಟ್ಟಿ ಇನ್ನಂಜೆ, ಉಳ್ತೂರು ಮೋಹನದಾಸ ಶೆಟ್ಟಿ, ಅಶೋಕ್ ಶೆಟ್ಟಿ ಕಲ್ಪವೃಕ್ಷ ಇವರುಗಳ ಉಪಸ್ಥಿತಿಯಲ್ಲಿ ಮುಂಬೈಯಲ್ಲಿ ನಡೆದ ಸಭೆಯಲ್ಲಿ ಮಾತುಕತೆ ನಡೆಸಿ ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಐಕಳ ಹರೀಶ್ ಶೆಟ್ಟಿಯವರ ನಡುವಿನ ಮನಸ್ತಾಪ ಸುಖಾಂತ್ಯ ಕಂಡಿದೆ.

__Sathish Kapikad 

Share.
Leave A Reply

Exit mobile version