
ಮಂಗಳೂರು : ಸಿದ್ದರಾಮಯ್ಯ ಅವರ ಈ ಹಿಂದಿನ ಬಜೆಟ್ನಂತೆ ಈ ಬಜೆಟ್ ಕೂಡಾ ಕೇವಲ ಘೋಷಣೆಗೆ ಸೀಮಿತವಾದ ಹಾಗಿದೆ. ಬಜೆಟ್ ಗಾತ್ರ ಹಿಗ್ಗಿದೆ. ಜತೆಗೆ ಸಾಲದ ಹೊರೆಯೂ ಇಮ್ಮಡಿಯಾಗಿದೆ ಎಂದು ದ. ಕ ಜಿಲ್ಲೆಯ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದ್ದಾರೆ.
ಅಬಕಾರಿ ಇಲಾಖೆ ಮೂಲಕ ಸರ್ಕಾರ ಹೆಚ್ಚಿನ ರಾಜಸ್ವ ನಿರೀಕ್ಷಿಸಿರುವುದು ರಾಜ್ಯದ ಜನತೆಯ ದುರಂತ. ಸಾಲದಲ್ಲಿ ಮುಳುಗಿರುವ ಈ ಸರ್ಕಾರ ಬಜೆಟ್ ನ ಶೇ. 25ರಷ್ಟು ಘೋಷಣೆಗಳನ್ನು ಕೂಡಾ ಕಾರ್ಯಗತ ಮಾಡುವುದು ಸಾಧ್ಯವಿಲ್ಲ.
ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿರುವುದೇ ಬಜೆಟ್ ನ ದೊಡ್ಡ ಸಾಧನೆ. ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಪುತ್ತೂರು ಮೆಡಿಕಲ್ ಕಾಲೇಜ್ ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಪಾಲಿಗೆ ನಿರಾಶಾದಾಯಕ ಬಜೆಟ್ ಎಂದು ನಳಿನ್ ಕುಮಾರ್ ಕಟೀಲು ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
__Sathish Kapikad


