ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್‌ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.

ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ ಹೇಳಿದರು.

ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ವಕೀಲರಾದ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ, ವಕೀಲರಾದ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.

_Sathish Kapikad

Share.
Leave A Reply

Exit mobile version