Close Menu
SK Media NewsSK Media News
    What's Hot

    ಕುಂಟಿಕಾನ್ ಸರ್ವೀಸ್ ರಸ್ತೆ ಮಧ್ಯೆ ಕಾಂಕ್ರೀಟ್ ಸ್ಲಾಬ್ ಕುಸಿದು ಕಂದಕ ನಿರ್ಮಾಣ : ವಾಹನ ಸವಾರರ ಪರದಾಟ – (video)

    May 29, 2026

    ಇಂದು ಕೂಡ ಅಮ್ಮನ ದರ್ಶನಕ್ಕಾಗಿ ಬೋಳೂರಿಗೆ ಹರಿದು ಬಂದ ಸಾವಿರಾರು ಭಕ್ತರು : ವಿನಯವೇ ಯಶಸ್ಸಿನ ಅಡಿಪಾಯ – ಅಮ್ಮ

    May 29, 2026

    ಮಂಗಳೂರಿನಲ್ಲಿ ಶ್ರೀ ಮಾತಾ ಅಮೃತಾನಂದಮಯಿ ದೇವಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ : ಅಮೃತ ಸಂಗಮಕ್ಕೆ ಹರಿದು ಬಂದ ಜನ ಸಾಗರ

    May 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » “ಗಜಾನನ ಕ್ರಿಕೆಟರ್ಸ್” ತುಳು ಸಿನಿಮಾದ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆ : ಮೇ 22 ರಂದು ಚಿತ್ರ ಬೆಳ್ಳಿ ತೆರೆಗೆ
    ಕರಾವಳಿ

    “ಗಜಾನನ ಕ್ರಿಕೆಟರ್ಸ್” ತುಳು ಸಿನಿಮಾದ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆ : ಮೇ 22 ರಂದು ಚಿತ್ರ ಬೆಳ್ಳಿ ತೆರೆಗೆ

    May 19, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಮಂಗಳೂರು, ಸುರತ್ಕಲ್, ಪಡುಬಿದ್ರೆ, ಉಡುಪಿ, ಕುಂದಾಪುರ, ಮಣಿಪಾಲ ಕಾರ್ಕಳ, ಪುತ್ತೂರು, ಬೆಳ್ತಂಗಡಿ, ದೇರಳಕಟ್ಟೆ ಮೊದಲಾದ ಕಡೆಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದು ನಿರ್ಮಾಪಕ ಪ್ರಜ್ವಲ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ನಗರದಲ್ಲಿ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ.

    ಕೀರ್ತನ್ ಭಂಡಾರಿ ಅವರು ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಮಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಚಿತ್ರದಲ್ಲಿ ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಎಂದು ತಿಳಿಸಿದರು.

    ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಅನ್ವಿತಾ ಸಾಗರ್, ಸಮತಾ ಅಮೀನ್, ಸರ್ವೋತ್ತಮ ಶೆಟ್ಟಿ ಅಬುದಾಭಿ, ವಾಲ್ಟರ್ ನಂದಳಿಕೆ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪುಷ್ಪರಾಜ್ ಬೊಳ್ಳಾರು, ರೂಪ ವರ್ಕಾಡಿ, ಲಂಚುಲಾಲ್, ಸಚಿನ್ ಮಾಡ, ಜೇಮ್ಸ್ ಮೆಂಡೋನ್ಸಾ, ಕರಣ್ ಪೂಜಾರಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

    ವಿನುತ್ ಕೆ. ಸುವರ್ಣ ಅವರ ಛಾಯಾಗ್ರಹಣ, ಸುಜಯ್ ಶಿವರಾಮ್ ಹಾಗೂ ಕೌಶಿಕ್ ಭಂಡಾರಿ ಅವರ ಸಂಕಲನ ಇದೆ. ಗೀತಾ ಸಾಹಿತ್ಯವನ್ನು ಕೀರ್ತನ್ ಭಂಡಾರಿ, ಸೃಜನ್ ಮಾನವ್, ಶ್ರೀನಿಧಿ ಶೆಟ್ಟಿ ರಚಿಸಿದ್ದಾರೆ.

    ಸಹ ನಿರ್ಮಾಪಕ ರೋಹನ್ ಪಿರೇರ ವಾಮಂಜೂರು ಮತ್ತು ಸಂತೋಷ್ ಲಾಡ್, ಸಂಗೀತ: ಸೃಜನ್ ಕುಮಾರ್ ತೋನ್ಸೆ. ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದು ನಾಯಕ ನಟ ವಿನೀತ್ ಕುಮಾರ್ ಮಾಹಿತಿ ನೀಡಿದರು.

    ಪತ್ರಿಕಾಗೋಷ್ಠಿಯಲ್ಲಿ ನಟ ವಿನೀತ್ ಕುಮಾರ್, ನಟಿ ಸಮತಾ ಅಮೀನ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಸಹ ನಿರ್ಮಾಪಕರಾದ ರೋಹನ್ ಪಿರೇರಾ ವಾಮಂಜೂರು, ಸಂತೋಷ್ ಲಾಡ್, ಸುರೇಶ್ ರಾವ್ ಕೊಕ್ಕಡ ಮೊದಲಾದವರು ಉಪಸ್ಥಿತರಿದ್ದರು.

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಉಳ್ಳಾಲ ತಾಲ್ಲೂಕಿನ ಪ್ರಥಮ ಪೈಲಟ್ ಚರಣ್ ರಾಜ್ ಕೆ. ಶೆಟ್ಟಿ ಹಾಗೂ ಪ್ರಕೃತಿ ಸಿ. ಶೆಟ್ಟಿ ದಂಪತಿಗೆ ಅಬ್ಬಕ್ಕ ಸಾಧನಾ ಪ್ರಶಸ್ತಿ” ಪ್ರದಾನ
    Next Article ಸಾರ್ವಜನಿಕರ ಉಪಯೋಗಕ್ಕಾಗಿ ಸ್ನಾನಗೃಹ ಸಹಿತ 10 ಶೌಚಾಲಯಗಳನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್

    Related Posts

    ಕರಾವಳಿ

    ಕುಂಟಿಕಾನ್ ಸರ್ವೀಸ್ ರಸ್ತೆ ಮಧ್ಯೆ ಕಾಂಕ್ರೀಟ್ ಸ್ಲಾಬ್ ಕುಸಿದು ಕಂದಕ ನಿರ್ಮಾಣ : ವಾಹನ ಸವಾರರ ಪರದಾಟ – (video)

    May 29, 2026
    ಅಂತಾರಾಷ್ಟ್ರೀಯ

    ಇಂದು ಕೂಡ ಅಮ್ಮನ ದರ್ಶನಕ್ಕಾಗಿ ಬೋಳೂರಿಗೆ ಹರಿದು ಬಂದ ಸಾವಿರಾರು ಭಕ್ತರು : ವಿನಯವೇ ಯಶಸ್ಸಿನ ಅಡಿಪಾಯ – ಅಮ್ಮ

    May 29, 2026
    ಅಂತಾರಾಷ್ಟ್ರೀಯ

    ಮಂಗಳೂರಿನಲ್ಲಿ ಶ್ರೀ ಮಾತಾ ಅಮೃತಾನಂದಮಯಿ ದೇವಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ : ಅಮೃತ ಸಂಗಮಕ್ಕೆ ಹರಿದು ಬಂದ ಜನ ಸಾಗರ

    May 28, 2026
    Add A Comment
    Leave A Reply Cancel Reply

    Top Posts

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ 

    May 21, 2026
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ 

    May 21, 2026
    Our Picks

    ಕುಂಟಿಕಾನ್ ಸರ್ವೀಸ್ ರಸ್ತೆ ಮಧ್ಯೆ ಕಾಂಕ್ರೀಟ್ ಸ್ಲಾಬ್ ಕುಸಿದು ಕಂದಕ ನಿರ್ಮಾಣ : ವಾಹನ ಸವಾರರ ಪರದಾಟ – (video)

    May 29, 2026

    ಇಂದು ಕೂಡ ಅಮ್ಮನ ದರ್ಶನಕ್ಕಾಗಿ ಬೋಳೂರಿಗೆ ಹರಿದು ಬಂದ ಸಾವಿರಾರು ಭಕ್ತರು : ವಿನಯವೇ ಯಶಸ್ಸಿನ ಅಡಿಪಾಯ – ಅಮ್ಮ

    May 29, 2026

    ಮಂಗಳೂರಿನಲ್ಲಿ ಶ್ರೀ ಮಾತಾ ಅಮೃತಾನಂದಮಯಿ ದೇವಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ : ಅಮೃತ ಸಂಗಮಕ್ಕೆ ಹರಿದು ಬಂದ ಜನ ಸಾಗರ

    May 28, 2026
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.