
(ಕಡತ ಚಿತ್ರ)
ಮಂಗಳೂರು, ಮೇ.20 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಮೇ 22ರ ಮುಂಜಾನೆ ಏರ್ ಇಂಡಿಯಾ ವಿಮಾನ ರನ್ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಶುಕ್ರವಾರಕ್ಕೆ 16 ವರ್ಷ ಪೂರ್ಣವಾಗುತ್ತದೆ.
ಮೇ 22ರ ಮುಂಜಾನೆ ಏರ್ ಇಂಡಿಯಾ ವಿಮಾನ ರನ್ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತ ನಡೆದು ಹಲವು ವರ್ಷಗಳೇ ಕಳೆದರೂ ಕಹಿ ಘಟನೆ ಮಾತ್ರ ಎಲ್ಲರ ಮನದಲ್ಲಿ ಜೀವಂತವಾಗಿದೆ.
ದುಬೈಯಿಂದ ಮರಳುತ್ತಿದ್ದ ವಿಮಾನ ಬಜ್ಪೆ ವಿಮಾನ ನಿಲ್ದಾಣದ ತೀರಾ ಸಮೀಪ ಇನ್ನೇನು ಇಳಿಬೇಕು ಅನ್ನುವಷ್ಟರಲ್ಲಿ ಮಹಾ ದುರಂತ ಸಂಭವಿಯೇ ಬಿಟ್ಟಿತ್ತು. ದೇಶವನ್ನೇ ಬೆಚ್ಚಿಬೀಳಿಸಿದ್ದ, ಈ ಘಟನೆ ಜಾಗತಿಕ ಮಟ್ಟದಲ್ಲಿ ಭಾರೀ ಸುದ್ದಿಗೆ ಕಾರಣವಾಯಿತು.
ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತವಾದ ಹಿನ್ನಲೆಯಲ್ಲಿ, ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜರಗಿಸುತ್ತಾ ಬಂದಿದ್ದು, ವಿಮಾನ ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿರುತ್ತದೆ.
ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಮೇ 22 ರಂದು ಬೆಳಿಗ್ಗೆ 10 ಗಂಟೆಗೆ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
_Sathish Kapikad

