
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸ್ಥಾಪನಾಚಾರ್ಯರಾದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ ಆಗಸ್ಟ್ 28ರ ಶುಕ್ರವಾರದಂದು ಕ್ಷೇತ್ರದಲ್ಲಿ ಜರುಗಲಿದೆ.
ಬೆಳಗ್ಗೆ 8.45ಕ್ಕೆ ಸಾಮೂಹಿಕ ಪ್ರಾರ್ಥನೆ, ಗುರುಪೂಜೆ ಪ್ರಸಾದ ವಿತರಣೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ರಾತ್ರಿ 7.45ಕ್ಕೆ ಮಹಾಗುರುಪೂಜೆ, ಪ್ರಸಾದ ವಿತರಣೆ ನೆರವೇರಲಿದೆ
ಮೆರವಣಿಗೆ:
ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ವತಿಯಿಂದ ಶ್ರೀ ಗುರುವರ್ಯರ ಭಾವಚಿತ್ರ ಮೆರವಣಿಗೆ ಸಂಜೆ 6 ಗಂಟೆಗೆ ಗಾಂಧಿನಗರ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಿಂದ ಹೊರಟು ಮಣ್ಣಗುಡ್ಡೆ, ಕಂಬಳಕ್ರಾಸ್ ರಸ್ತೆಯಾಗಿ ಸಾಗಿ ಕ್ಷೇತ್ರವನ್ನು ತಲುಪಲಿದೆ.
ವರಮಹಾಲಕ್ಷ್ಮೀ ಪೂಜೆ:
ಬೆಳಗ್ಗೆ 9ಕ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಭಿಷೇಕ, 9.45ಕ್ಕೆ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದ ವೇದಿಕೆಯಲ್ಲಿ ಕಲಶ ಪ್ರತಿಷ್ಠಾಪನೆ, ಬೆಳಗ್ಗೆ 10ಕ್ಕೆ ಲಲಿತಾ ಸಹಸ್ರನಾಮ ಪಠಣ, ಭಜನೆ, ಬೆಳಗ್ಗೆ 11.30ಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜೆ, ಮಧ್ಯಾಹ್ನ 12ಕ್ಕೆ ದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ ನೆರವೇರಲಿದೆ.
500 ಮಹಿಳೆಯರಿಗೆ ವಿಶೇಷ ಅವಕಾಶ:
ಶ್ರೀಕ್ಷೇತ್ರದ ಗೋಕರ್ಣನಾಥ ಕಲ್ಯಾಣ ಮಂಟಪ ವೇದಿಕೆಯಲ್ಲಿ ಜರುಗುವ ವರಮಹಾಲಕ್ಷ್ಮೀ ಪೂಜೆಯಲ್ಲಿ ಮೊದಲು ಆಗಮಿಸುವ 500 ಮಹಿಳೆಯರಿಗೆ ಶ್ರೀದೇವಿಯ ಮಹಾ ಅರ್ಚನೆಯಲ್ಲಿ ಕುಳಿತುಕೊಳ್ಳಲು ಈ ಬಾರಿ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಮಾತೆರಯರು ಮುಂಚಿತವಾಗಿ ಆಗಮಿಸಬೇಕಾಗಿ ಕೋರಲಾಗಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಹಾಗೂ ಶ್ರೀ ವರಮಹಾಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಕ್ಷೇತ್ರಾಡಳಿತ ಸಮಿತಿ ತಿಳಿಸಿದೆ.
_Sathish Kapikad



